December 1, 2025
hariram

ಉಡುಪಿ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಎಸ್‌ಪಿ) ಸೇವೆ ಸಲ್ಲಿಸುತ್ತಿದ್ದ ಡಾ. ಅರುಣ್ ಕೆ. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಹರಿರಾಂ ಶಂಕರ್ ಅವರನ್ನು ಉಡುಪಿ ಜಿಲ್ಲೆಯ ನೂತನ ಎಸ್‌ಪಿಯಾಗಿ ನೇಮಿಸಲಾಗಿದೆ.

ಹರಿರಾಂ ಶಂಕರ್ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಕುಂದಾಪುರ ಉಪವಿಭಾಗದ ಎಎಸ್ಪಿಯಾಗಿ ಹಾಗೂ ಮಂಗಳೂರು ನಗರದ ಡಿಸಿಪಿ, ಹಾಸನ ಜಿಲ್ಲಾ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಇದೇ ಸಂದರ್ಭದಲ್ಲಿ, ಮಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಸುಧೀರ್ ಕುಮಾರ್ ರೆಡ್ಡಿ ಅವರು ನೇಮಕಗೊಂಡಿದ್ದಾರೆ. ಅವರು ಈಗಾಗಲೇ ಬೇಹುಗಾರಿಕಾ ಇಲಾಖೆಯ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಅವರು ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅನುಪಮ್ ಅಗ್ರವಾಲ್ ಅವರ ಸ್ಥಾನವನ್ನು ಭರಿಸುತ್ತಿದ್ದಾರೆ.

ಡಾ. ಅರುಣ್ ಕೆ. ಅವರು ದಕ್ಷಿಣ ಕನ್ನಡ ಜಿಲ್ಲೆಯ ಎಸ್‌ಪಿಯಾಗಿ ಯತೀಶ್ ಎನ್. ಅವರ ಸ್ಥಾನಕ್ಕೆ ನಿಯುಕ್ತಿಯಾಗಿದ್ದಾರೆ.

error: Content is protected !!