August 6, 2025
images

ಮಧೂರು ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಮಂಗಳೂರು-ಮಧೂರು ಮಾರ್ಗದಲ್ಲಿ ವಿಶೇಷ ಬಸ್ ಸೇವೆಯನ್ನು ಆರಂಭಿಸಲಾಗಿದೆ.

ಈ ವಿಶೇಷ ಬಸ್ ಸೇವೆ ಏಪ್ರಿಲ್ 4ರಿಂದ ಲಭ್ಯವಿದ್ದು, ಮಂಗಳೂರಿನ ಬಿಜೈ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಿಂದ ಬೆಳಿಗ್ಗೆ 10.00 ಮತ್ತು 10.20ಕ್ಕೆ ಮಧೂರಿಗೆ ಪ್ರಯಾಣಿಸಲು ಹೊರಡಲಿದೆ.

ಮಧೂರಿಯಿಂದ ಮಂಗಳೂರಿಗೆ ಮಧ್ಯಾಹ್ನ 1.30 ಮತ್ತು 1.45ಕ್ಕೆ ಬಸ್ ಹೊರಡಿಸಲಾಗುವುದು ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!