
ಮಂಗಳೂರು: ರಾಜ್ಯದಾದ್ಯಂತ ಇಂದಿನಿಂದ ಮುಂಗಾರು ಚುರುಕುಗೊಳ್ಳಲಿದ್ದು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ರೆಡ್ ಅಲರ್ಟ್ ಜಿಲ್ಲೆಗಳು:
- ಹಾಸನ
- ಶಿವಮೊಗ್ಗ
- ಚಿಕ್ಕಮಗಳೂರು
- ಉತ್ತರ ಕನ್ನಡ
- ದಕ್ಷಿಣ ಕನ್ನಡ
- ಉಡುಪಿ
ಈ ಜಿಲ್ಲೆಗಳಲ್ಲಿ ಜುಲೈ 10ರವರೆಗೆ ಭಾರಿ ಮಳೆಯಾಗಲಿದೆ.
ಆರೆಂಜ್ ಅಲರ್ಟ್:
- ಬೆಳಗಾವಿ
- ಕೊಡಗು
ಯೆಲ್ಲೋ ಅಲರ್ಟ್:
- ಧಾರವಾಡ
ಮಳೆಯ ಮುನ್ಸೂಚನೆ ಇರುವ ಇತರೆ ಜಿಲ್ಲೆಗಳು:
ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ.