August 6, 2025
images

ಮಂಗಳೂರು: ಬಜಪೆ ಕಿನ್ನಿಪದವಿಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಹಿನ್ನೆಲೆ, ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ಅವರು ಮೇ 2 ರಿಂದ ಮೇ 6 ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿರುವುದಾಗಿ ಶುಕ್ರವಾರ ಪ್ರಕಟಿಸಿದ್ದಾರೆ.

ಕಮಿಷನರೇಟ್ ವ್ಯಾಪ್ತಿಯಲ್ಲಿ ಶಾಂತಿ ಕಾಪಾಡಲು ಹಾಗೂ ಕಾನೂನು ಸುವ್ಯವಸ್ಥೆ ಹದಗೆಡುವುದನ್ನು ತಡೆಯಲು, ಭಾರತೀಯ ನ್ಯಾಯ ಸುರಕ್ಷಾ ಸಂಹಿತೆ ಸೆಕ್ಷನ್ 163ರಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಗರದ ಗುಪ್ತಚರ ಇಲಾಖೆ ನೀಡಿದ ವರದಿಯ ಮೇರೆಗೆ ಈ ನಿಷೇಧಾಜ್ಞೆ ಹೊರಡಿಸಲಾಗಿದೆ.

ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಈ ಕೆಳಕಂಡ ನಿಬಂಧನೆಗಳು ಅನ್ವಯವಾಗುತ್ತವೆ:

  • ಐದು ಅಥವಾ ಹೆಚ್ಚು ಜನರು ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರುವಂತಿಲ್ಲ.
  • ಶಸ್ತ್ರಾಸ್ತ್ರಗಳು, ದೊಣ್ಣೆ, ಕತ್ತಿ, ಕೋಲು, ಬಂದೂಕು, ಚಾಕು ಮುಂತಾದವುಗಳನ್ನು ಒಯ್ಯುವಂತಿಲ್ಲ.
  • ಪಟಾಕಿ ಸಿಡಿಸುವುದು, ಆಯಸಿಡ್ ಅಥವಾ ಸ್ಫೋಟಕಗಳನ್ನು ಒಯ್ಯುವುದು ನಿಷಿದ್ಧ.
  • ವ್ಯಕ್ತಿಗಳ ಪ್ರತಿಕೃತಿ ಸುಡುವುದು, ಕಲ್ಲು ಅಥವಾ ಕ್ಷಿಪಣಿಯನ್ನು ಎಸೆಯುವ ಸಾಧನಗಳನ್ನು ಬಳಸುವುದು, ಶೇಖರಿಸುವುದು ಅಥವಾ ತಯಾರಿಸುವುದೂ ನಿರ್ಬಂಧಿತವಾಗಿದೆ.
  • ಸರ್ಕಾರಿ ಸಂಸ್ಥೆಗಳ ವಿರುದ್ಧ ಅಥವಾ ಅಧಿಕಾರಿಗಳ ವಿರುದ್ಧ ನಿಂದನಾತ್ಮಕ ಘೋಷಣೆ ಕೂಗುವುದು, ಪ್ರಚೋದನಾತ್ಮಕ ಭಾಷಣ ಮಾಡುವುದು, ಅವಾಚ್ಯ ಶಬ್ದ ಬಳಸುವುದು, ಗಾಯನ ಹಾಗೂ ಪ್ರತಿಭಟನೆ ನಡೆಯುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಇವುಗಳನ್ನು ಉಲ್ಲಂಘಿಸುವ ಯಾವುದೇ ಕೃತ್ಯಗಳು ಕಾನೂನು ಕ್ರಮಕ್ಕೆ ಒಳಪಡುವುದಾಗಿ ಕಮಿಷನರ್ ಸೂಚಿಸಿದ್ದಾರೆ.

error: Content is protected !!