August 6, 2025
2025-03-03 162856

ಪುತ್ತೂರು ನಗರದ ಹೊರವಲಯ ಮಂಜಲ್ಪಡ್ಪು ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರವಿವಾರ ಸಂಜೆ ಸಂಭವಿಸಿದ ಅಪಘಾತದಲ್ಲಿ ಆಟೋ ರಿಕ್ಷಾ ಬಸ್‌ಗೆ ಢಿಕ್ಕಿ ಹೊಡೆದ ಪರಿಣಾಮ ಮಹಿಳೆ ಮತ್ತು ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಂಗಳೂರುದಿಂದ ಪುತ್ತೂರಿಗೆ ಬರುತ್ತಿದ್ದ ಕೆ.ಎಸ್‍.ಆರ್.ಟಿ.ಸಿ ಬಸ್ ಮತ್ತು ಪುತ್ತೂರಿನಿಂದ ಕಬಕ ಕಡೆಗೆ ತೆರಳುತ್ತಿದ್ದ ಆಟೋ ರಿಕ್ಷಾ ಪರಸ್ಪರ ಢಿಕ್ಕಿ ಹೊಡೆದಿದೆ. ರಿಕ್ಷಾವನ್ನು ಕದಂಬಾಡಿ ಗುಡ್ಡೆಯ ನಿವಾಸಿ ಮಹಮ್ಮದ್ ಚಲಾಯಿಸುತ್ತಿದ್ದು, ಢಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಪರಿಣಾಮ ಮಹಮ್ಮದ್ ಅವರ ಪತ್ನಿ ಜಮೀಲ (49) ಹಾಗೂ ಅವರ ಮೊಮ್ಮಗ ತಪ್ಸಿಬ್ (5) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಗಂಭೀರ ಗಾಯಗೊಂಡ ರಿಕ್ಷಾ ಚಾಲಕ ಮಹಮ್ಮದ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಈ ಘಟನೆ ಸಂಬಂಧ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!