August 3, 2025
IMG-20250729-WA0647

ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ. ರಾವ್ ಮನೆಗೆ ಜುಲೈ 28ರ ಸಂಜೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳ ಮಹಜರು ನಡೆಸಿದರು.

ಸ್ಥಳ ಮಹಜರಿನ ವೇಳೆ ಸಂತ್ರಸ್ತೆಯು, ಆಕೆಯ ಮಗು ಮತ್ತು ತಾಯಿ, ಜೊತೆಗೆ ಆರೋಪಿಯ ಸಹೋದರಿ, ಒಬ್ಬ ಸಾಕ್ಷಿದಾರರು ಹಾಗೂ ವಕೀಲೆ ಶೈಲಜಾ ಅಮರನಾಥ್ ಹಾಜರಿದ್ದರು ಎಂದು ವರದಿಯಾಗಿದೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಕೃಷ್ಣ ಜೆ. ರಾವ್ ಜಾಮೀನು ಅರ್ಜಿ ಸಲ್ಲಿಸಿದ್ದರಾದರೂ, ನ್ಯಾಯಾಲಯ ಅದನ್ನು ವಜಾಗೊಳಿಸಿದೆ.

ಇನ್ಸ್‌ಪೆಕ್ಟರ್ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಈ ಮಹಜರು ಪ್ರಕ್ರಿಯೆ ನಡೆಯಿತು. ಆರೋಪಿಯು ಮದುವೆಯ ಭರವಸೆ ನೀಡಿದಂತಾಗಿ, ತನ್ನ ಮನೆಗೆ ಕರೆಸಿ ಒತ್ತಾಯಪೂರ್ವಕವಾಗಿ ದೈಹಿಕ ಸಂಬಂಧ ಬೆಳೆಸಿದನು ಎಂಬುದಾಗಿ ಸಂತ್ರಸ್ತೆ ದೂರು ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ಬಪ್ಪಳಿಗೆ ಗ್ರಾಮದಲ್ಲಿರುವ ಮನೆಗೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದರು.

error: Content is protected !!