
ಉಡುಪಿ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಂ.ಸಿ.ಎ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಪ್ರವೀಣ ಕುಮಾರಿ ಎಂ.ಕೆ. ಅವರಿಗೆ, “Advanced Data Analytics Model for Intelligent Transport System in Smart City” ಎಂಬ ಮಹಾಪ್ರಬಂಧಕ್ಕಾಗಿ ಮಂಗಳೂರು ವಿಶ್ವವಿದ್ಯಾನಿಲಯವು ಪಿಎಚ್.ಡಿ ಪದವಿಯನ್ನು ಪ್ರದಾನಿಸಿದೆ.
ಈ ಮಹಾಪ್ರಬಂಧವನ್ನು ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಅಧ್ಯಕ್ಷ ಮತ್ತು ಹಿರಿಯ ಪ್ರಾಧ್ಯಾಪಕ ಡಾ. ಮಂಜಯ್ಯ ಡಿ.ಎಚ್. ಅವರ ಮಾರ್ಗದರ್ಶನದಲ್ಲಿ ಪೂರ್ಣಗೊಳಿಸಿದ್ದಾರೆ.
ಪ್ರವೀಣ ಕುಮಾರಿ ಎಂ.ಕೆ. ಅವರು ಪುತ್ತೂರಿನ ಕೃಷ್ಣನಗರದ ನಿವಾಸಿ, ನಿವೃತ್ತ ಪಿ.ಎಸ್.ಐ ಪಿ.ಎಂ. ಕೃಷ್ಣ ನಾಯ್ಕ್ ಹಾಗೂ ಯಶೋದಾ ಕೃಷ್ಣ ದಂಪತಿಗಳ ಪುತ್ರಿ. ಇವರ ಪತಿ ನಾರಾಯಣ ಬಡೆಕ್ಕಿಲ ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.