ಮೂಡುಬಿದಿರೆ: ಮೂಡುಬಿದಿರೆ ನಗರ ಬಜರಂಗದಳದ ಸಂಯೋಜಕ ವಿಜಯೇಶ್ ಕುಮಾರ್ (30) ಮಾರ್ಚ್ 11 ರಂದು ರಾತ್ರಿ ಹೃದಯಾಘಾತದಿಂದ ನಿಧನರಾದರು. ಮಂಗಳವಾರ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತಕ್ಕೆ ಒಳಗಾದ ಅವರು ತಕ್ಷಣ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮಂಗಳವಾರ ರಾತ್ರಿ ಕೊನೆಯುಸಿರೆಳೆದರು.

ಅವರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ 10:30 ಗಂಟೆಗೆ ವಿದ್ಯಾಗಿರಿಯ ಸ್ವಗೃಹದಲ್ಲಿ ಕುಟುಂಬ ಹಾಗೂ ನೇರ ಸಂಬಂಧಿಕರೊಂದಿಗೆ ನೆರವೇರಿತು.
ವಿಜಯೇಶ್ ಕುಮಾರ್ ಅವರ ನಿಧನವು ಬಜರಂಗದಳ ಮತ್ತು ಸ್ಥಳೀಯ ಸಮುದಾಯಕ್ಕೆ ಭಾರೀ ನಷ್ಟವಾಗಿದೆ. ಬಜರಂಗದಳದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಅವರು ಸಂಘಟನೆಯ ಹಲವು ಹೋರಾಟಗಳಲ್ಲಿ ಭಾಗವಹಿಸಿದ್ದರು.
ಅವರ ನಿಧನಕ್ಕೆ ಅನೇಕ ಗಣ್ಯರು ಮತ್ತು ಬಜರಂಗದಳದ ಮುಖಂಡರು ಸಂತಾಪ ಸೂಚಿಸಿದ್ದಾರೆ.