August 6, 2025
n66638621517485705614217266589ab62a2639ffb986d1371d937de4cceb53f329435782199b6e79979fd9

ಭಾರೀ ಮಳೆಯ ಪರಿಣಾಮವಾಗಿ, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು ಹಾಗೂ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಮೇ 30, 2025) ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿಯೂ ಮಹಾಪ್ರಮಾಣದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆ, ಅಂಗನವಾಡಿ ಕೇಂದ್ರಗಳು ಮತ್ತು 1ರಿಂದ 10ನೇ ತರಗತಿವರೆಗೆ ಎಲ್ಲಾ ಶಾಲೆಗಳಿಗೆ ಮೇ 30, 2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಕೆ. ಆದೇಶ ಜಾರಿಗೊಳಿಸಿದ್ದಾರೆ.

ತೀವ್ರ ಮಳೆಯ ನಡುವೆಯೂ ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳು ಮಾತ್ರ ನಿಯಮಿತವಾಗಿ ನಡೆಯಲಿವೆ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

error: Content is protected !!