August 6, 2025
Screenshot_20250506_0916242-640x485

ರಾಯಚೂರು: ಶಕ್ತಿನಗರದಲ್ಲಿ ಯುವಕನೊಬ್ಬ ಆತ್ಮಹತ್ಯೆ – ಪೋಷಕರ ಮಾತು ಮನಸ್ಸಿಗೆ ಬಿದ್ದ ಕಾರಣ ಆತ್ಮಹತ್ಯೆ ಮಾಡಿಕೊಂಡ ಶಂಕೆ

ರಾಯಚೂರಿನ ಶಕ್ತಿನಗರದಲ್ಲಿ ಯುವಕನೊಬ್ಬ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತನನ್ನು ಸುದೀಪ್ ಕುಮಾರ್ (21) ಎಂದು ಗುರುತಿಸಲಾಗಿದೆ. ಅವನು ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದ.

ಪ್ರತಿ ದಿನ ಮನೆಗೆ ತಡವಾಗಿ ಬರುತ್ತಿದ್ದ ಕಾರಣ, ಪೋಷಕರು ಅವನಿಗೆ ಬುದ್ಧಿವಾದ ಹಾಗೂ ಗದರಿಕೆ ನೀಡುತ್ತಿದ್ದರು. ಇದರಿಂದ ಮನಸ್ಸಿಗೆ ಬಿದ್ದ ಸುದೀಪ್, ಮದ್ಯ ಸೇವನೆಯಲ್ಲಿದ್ದಾಗ ಮನೆಯ ಮುಂಭಾಗದಲ್ಲಿರುವ ವಿದ್ಯುತ್ ಕಂಬಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

error: Content is protected !!