August 5, 2025
Screenshot_20250710_2118332-640x460

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದ ಪ್ರಕರಣದಲ್ಲಿ, ಕಾರುವನ್ನು ಠಾಣೆಯಿಂದ ಬಿಡುಗಡೆಗೊಳಿಸಲು ಲಂಚ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಕದ್ರಿ ಟ್ರಾಫಿಕ್ ಠಾಣೆಯ ಹೆಡ್‌ಕಾನ್ಸ್‌ಟೇಬಲ್‌ ತಸ್ಲಿಂ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಂತೂರು ಸರ್ಕಲ್ ಬಳಿ ನಡೆದ ಅಪಘಾತಕ್ಕೆ ಸಂಬಂಧಿಸಿದಂತೆ ಕದ್ರಿ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ನಂತರ, ಹೆಡ್‌ಕಾನ್ಸ್‌ಟೇಬಲ್ ತಸ್ಲಿಂ ಅವರು ಕಾರಿನ ದಾಖಲೆಗಳನ್ನು ಠಾಣೆಗೆ ತರಬೇಕು ಎಂದು ಮಾಲಕರಿಗೆ ಸೂಚಿಸಿದ್ದರು. ಮಾಲಕರು ಕೂಡಾ ಸಂಬಂಧಿತ ದಾಖಲೆಗಳನ್ನು ಪೊಲೀಸರಿಗೆ ಒದಗಿಸಿದ್ದರು.

ಆದರೆ, ನಂತರ ಕಾರು ಬಿಡುಗಡೆಗೊಳಿಸಲು ತಸ್ಲಿಂ 50,000 ರೂಪಾಯಿ ಲಂಚವನ್ನು ಬೇಡಿಕೆಯಿಟ್ಟಿದ್ದಾರೆಯೆಂಬ ದೂರನ್ನು ಕಾರು ಮಾಲಕರು ಲೋಕಾಯುಕ್ತ ಪೊಲೀಸರಿಗೆ ನೀಡಿದ್ದರು. ಈ ಆಧಾರದ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ತಂಡ, ಲಂಚ ಸ್ವೀಕರಿಸುತ್ತಿದ್ದಾಗ ತಸ್ಲಿಂ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ಕೇಸಿಗೆ ಸಂಬಂಧಿಸಿದಂತೆ ಇನ್ನೊಬ್ಬ ಹೆಡ್‌ಕಾನ್ಸ್‌ಟೇಬಲ್ ವಿರುದ್ಧವೂ ಲೋಕಾಯುಕ್ತ ಪೊಲೀಸರು ತನಿಖೆ ಆರಂಭಿಸಿದ್ದು, ಪ್ರಕರಣ ಮುಂದುವರೆದಿದೆ.

error: Content is protected !!