August 5, 2025
WhatsApp-Image-2025-05-30-at-10.51.52_7d208e65

ವಿಟ್ಲ: ಬೈಕ್ ಲಾರಿ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ, ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳಪದವು ಎಂಬಲ್ಲಿ ನಡೆದಿದೆ.

ಒಕ್ಕೆತ್ತೂರು ಗ್ರಾಮದ ಫಾರಿಸ್ ಮತ್ತು ಇರ್ಫಾನ್ ಎಂಬ ಇಬ್ಬರು ಯುವಕರು ಮಂಗಳಪದುವಿನ ದಿಕ್ಕಿಗೆ ತೆರಳುತ್ತಿದ್ದ ವೇಳೆ, ಕನ್ಯಾನ ಕಡೆಯಿಂದ ಬಾಕ್ಸೈಟ್ ಮಣ್ಣು ಸಾಗಿಸುತ್ತಿದ್ದ ಲಾರಿ ಮಂಗಳಪದುವಿನ ರಸ್ತೆಯ ಮೇಲೆ ನಿಲ್ಲಿಸಲಾಗಿತ್ತು. ಈ ವೇಳೆ ಬೈಕ್ ನಿಯಂತ್ರಣ ತಪ್ಪಿ ಲಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಗಾಯಗೊಂಡ ಫಾರಿಸ್ ಮತ್ತು ಇರ್ಫಾನ್ ಅನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತು. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ಸ್ಥಳೀಯರ ಪ್ರಕಾರ, ಲಾರಿ ಚಾಲಕ ದುರ್ಬಾಳತನದಿಂದ ಲಾರಿಯನ್ನು ರಸ್ತೆಯಲ್ಲೇ ನಿಲ್ಲಿಸಿ ಚಹಾ ಕುಡಿಯಲು ಹೋಗಿದ್ದ ಎನ್ನಲಾಗಿದೆ.

error: Content is protected !!