August 6, 2025
Screenshot_20250622_1337282

ಶಿವಮೊಗ್ಗ: ನಗರದ ಬೊಮ್ಮನಕಟ್ಟೆ ಕೆರೆ ಏರಿ ಬಳಿ ತಡರಾತ್ರಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.

ಹತ್ಯೆಗೀಡಾದ ರೌಡಿಶೀಟರ್‌ ಅವಿನಾಶ್ (32) ಎಂದು ಗುರುತಿಸಲಾಗಿದೆ.

ಮುಂಬರುವ ವರದಿಗಳಂತೆ, ಅವಿನಾಶ್ ಮೊದಲು ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ. ಐದು ವರ್ಷ ಜೈಲಿನಲ್ಲಿ ಕಳೆದ ಬಳಿಕ ಮೇಲ್ಮನವಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಯಾಗಿದ್ದ ಎನ್ನಲಾಗಿದೆ.

ಈ ನಡುವೆ ಪಾರ್ಟಿ ಮಾಡುವ ನೆಪದಲ್ಲಿ ಆತನನ್ನು ಬೊಮ್ಮನಕಟ್ಟೆಗೆ ಕರೆತಂದು, ಅಲ್ಲಿ ಮಾರಕಾಸ್ತ್ರಗಳಿಂದ ಹತ್ಯೆ ಮಾಡಿದ್ದಾರೆಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ದೊರಕುತ್ತಿದ್ದಂತೆ ವಿನೋಬನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

error: Content is protected !!