August 7, 2025
sidi

ಮೈಸೂರು, ಮಾರ್ಚ್ 24: ನಂಜನಗೂಡು ತಾಲ್ಲೂಕಿನ ಅಡಕನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ, ಕಾಡು ಹಂದಿ ಬೇಟೆಗೆ ಇಡಲಾದ ಸಿಡಿಮದ್ದು (Explosives) ಸ್ಫೋಟಿಸಿ ಹಸುವಿನ ಬಾಯಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಈ ಹಸು, ಕೆಂಪಿಸಿದ್ದನಹುಂಡಿ ಗ್ರಾಮದ ರೈತ ಚನ್ನನಂಜೇಗೌಡ ಅವರದ್ದಾಗಿದ್ದು, ಮೇಯಲು ಬಿಟ್ಟ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಕಿಡಿಗೇಡಿಗಳಿಂದ ಈ ಕೃತ್ಯ ನಡೆದಿದೆ ಎನ್ನುವ ಶಂಕೆ ವ್ಯಕ್ತವಾಗಿದೆ. ಪ್ರಸ್ತುತ, ಹಸು ಗಂಭೀರ ಪರಿಸ್ಥಿತಿಯಲ್ಲಿ ಜೀವೋತ್ಪತ್ತಿಗಾಗಿ ಹೋರಾಟ ನಡೆಸುತ್ತಿದೆ.

ಚನ್ನನಂಜೇಗೌಡ ಅವರು ತಮ್ಮ ಹಸುವನ್ನು ಗ್ರಾಮದ ವಾಟರ್ ಟ್ಯಾಂಕ್ ಬಳಿ ಮೇಯಲು ಬಿಟ್ಟಿದ್ದಾಗ, ಕಾಡು ಹಂದಿಗಳ ಬೇಟೆಗೆ ಅಡಗಿಸಿಟ್ಟಿದ್ದ ಸಿಡಿಮದ್ದು ಅದು ನುಂಗಿದ ಪರಿಣಾಮ ಸ್ಫೋಟಗೊಂಡಿದೆ.

ಘಟನೆ ಬಗ್ಗೆ ಮಾಹಿತಿ ಪಡೆದ ನಂಜನಗೂಡು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

error: Content is protected !!