August 6, 2025
n668857525175031459183322fbb38262a1380f617578b81d8355790dfff32e6e826bb93652337dcf657970

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ತಿಂಗಳು ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ರೆಹಿಮಾನ್ ಎಂಬ ಮತ್ತೊಬ್ಬ ಯುವಕನೂ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೀಡಾದ ಪ್ರಕರಣ ನಡೆದಿದೆ.

ಈ ಎರಡು ಕೊಲೆ ಪ್ರಕರಣಗಳು ರಾಜ್ಯದ ಮಟ್ಟದಲ್ಲಿ ಸಂಚಲನ ಹುಟ್ಟುಹಾಕಿದ್ದು, ಇದೀಗ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಈ ಸಂಬಂಧ ಮಧ್ಯಪ್ರವೇಶ ಮಾಡಿದೆ. ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ವಿರುದ್ಧ ತನಿಖೆ ನಡೆಸುವಂತೆ ಸೂಚನೆ ನೀಡಿದ್ದು, ಈ ಕುರಿತು ಸಮಗ್ರ ವರದಿಯನ್ನು ಎರಡು ವಾರಗಳೊಳಗೆ ಸಲ್ಲಿಸುವಂತೆ ತನಿಖಾ ವಿಭಾಗದ ಮಹಾನಿರ್ದೇಶಕರಿಗೆ ಆದೇಶ ನೀಡಲಾಗಿದೆ.

ಈ ನಡುವೆ, ಪೊಲೀಸರು ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಹಿಂದೂ ಕಾರ್ಯಕರ್ತರ ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಭರತ್ ಶೆಟ್ಟಿ ಎಂಬ ಮಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಶಾಸಕರವರು ಈ ಸಂಬಂಧ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದನ್ನು ಆಧಾರವನ್ನಾಗಿಸಿಕೊಂಡು ತನಿಖೆ ಆರಂಭಿಸಲು ಆಯೋಗ ಸೂಚನೆ ನೀಡಿದೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮಾನವ ಹಕ್ಕುಗಳ ಆಯೋಗ, ಸ್ಥಳ ಪರಿಶೀಲನೆ ನಡೆಸಿ ಪೂರಕ ಮಾಹಿತಿಯೊಂದಿಗೆ ವರದಿ ನೀಡುವಂತೆ ತನ್ನ ತನಿಖಾ ಘಟಕಕ್ಕೆ ಸೂಚನೆ ನೀಡಿದೆ.

error: Content is protected !!